ADVERTISEMENT

ಬ್ಯಾಂಕ್ ಆಫ್ ಬರೋಡಾ ಅಭಿಯಾನ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2022, 16:19 IST
Last Updated 7 ಮಾರ್ಚ್ 2022, 16:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡಾ, ಮಾರ್ಚ್‌ 31ರವರೆಗೆ ಎಂಎಸ್‌ಎಂಇ ಉತ್ಸವ್ ಅಭಿಯಾನ ಹಮ್ಮಿಕೊಂಡಿದ್ದು ಇದರ ಭಾಗವಾಗಿ ಮಾರ್ಚ್ 5ರಂದು ಗ್ರಾಹಕರ ಸಮಾವೇಶ ಆಯೋಜಿಸಿತ್ತು.

ಬೆಂಗಳೂರು ವಲಯದ ಮುಖ್ಯಸ್ಥ ಸುಧಾಕರ ಡಿ. ನಾಯಕ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿದೇಶಿ ವಿನಿಮಯ ಸೇವೆಗಳು, ಎಂಎಸ್‌ಎಂಇ ವಲಯಕ್ಕೆ ಮೀಸಲಾಗಿರುವ ವಿಶೇಷ ಸೇವೆಗಳ ಬಗ್ಗೆ ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ಬ್ಯಾಂಕ್‌ನ ಹೊಸ ಗ್ರಾಹಕರಿಗೆ ಶೇ 6.55ರ ದರದಲ್ಲಿ ಸಾಲ ಒದಗಿಸಲಾಗುತ್ತಿದೆ. ಸಂಸ್ಕರಣಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತಿದೆ ಎಂದು ಕೂಡ ಪ್ರಕಟಣೆಯು ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.