ADVERTISEMENT

ಬ್ಯಾಂಕ್‌ ಮುಷ್ಕರ ಕೈ ಬಿಟ್ಟ ಒಕ್ಕೂಟ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2019, 19:14 IST
Last Updated 23 ಸೆಪ್ಟೆಂಬರ್ 2019, 19:14 IST
   

ಬೆಂಗಳೂರು: ಸರ್ಕಾರಿ ಸ್ವಾಮ್ಯದ 10 ಬ್ಯಾಂಕ್‌ಗಳ ವಿಲೀನ ವಿರೋಧಿಸಿ ಬ್ಯಾಂಕ್‌ ಅಧಿಕಾರಿಗಳ ಒಕ್ಕೂಟಗಳು ಇದೇ 26, 27ರಂದು ಕರೆ ನೀಡಿದ್ದ ಮುಷ್ಕರವನ್ನು ಕೈಬಿಟ್ಟಿವೆ.

ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿಹಣಕಾಸು ಕಾರ್ಯದರ್ಶಿ ರಾಜೀವ್‌ ಕುಮಾರ್‌ ಅವರು ಭರವಸೆ ನೀಡಿದ್ದಾರೆ. ಹೀಗಾಗಿ ಮುಷ್ಕರ ಕೈಬಿಟ್ಟಿರುವುದಾಗಿ ಒಕ್ಕೂಟಗಳು ತಿಳಿಸಿವೆ.

ಬ್ಯಾಂಕ್‌ಗಳ ವಿಲೀನದಿಂದ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಲು ಸಮಿತಿ ರಚನೆ
ಮಾಡುವ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ವೇತನ ಪರಿಷ್ಕರಣೆ, ವಾರದಲ್ಲಿ ಐದು ದಿನ ಕೆಲಸ, ಥರ್ಡ್‌ ಪಾರ್ಟಿ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಕೈಬಿಡುವುದು ಸೇರಿದಂತೆ ಇನ್ನೂ ಹಲವು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ.

ADVERTISEMENT

ಅಖಿಲ ಭಾರತ ಬ್ಯಾಂಕ್‌ ಅಧಿಕಾರಿಗಳ ಸಂಘಟನೆ (ಎಐಬಿಒಸಿ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಎ), ಭಾರತೀಯ ರಾಷ್ಟ್ರೀಯ ಬ್ಯಾಂಕ್‌ ಅಧಿಕಾರಿಗಳ ಕಾಂಗ್ರೆಸ್‌ (ಐಎನ್‌ಬಿಒಸಿ) ಮತ್ತು ಬ್ಯಾಂಕ್‌ ಅಧಿಕಾರಿಗಳ ರಾಷ್ಟ್ರೀಯ ಸಂಘಟನೆ (ಎನ್‌ಒಬಿಒ) ಮುಷ್ಕರಕ್ಕೆ ಕರೆ ನೀಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.