ಮುಂಬೈ: ಉದ್ಯಮಿ ವಿಜಯ್ ಮಲ್ಯ ಅವರಿಂದ ಸಾಲ ವಸೂಲಿ ಮಾಡಲು ಅವರ ಚರಾಸ್ತಿಗಳನ್ನು ಹರಾಜು ಹಾಕಬಹುದು ಎಂದು ಸ್ಟೇಟ್ ಬ್ಯಾಂಕ್ ನೇತೃತ್ವದ 15 ಬ್ಯಾಂಕ್ಗಳ ಒಕ್ಕೂಟಕ್ಕೆ ಇಲ್ಲಿನ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ನ್ಯಾಯಾಲಯ 2016ರಲ್ಲಿ ಮಲ್ಯ ಅವರನ್ನು ಆರ್ಥಿಕ ಅಪರಾಧಿ ಎಂದು ಘೋಷಿಸಿತ್ತು. ಈ ವೇಳೆ ಅವರಿಗೆ ಸೇರಿದ ಷೇರುಗಳು
ಹಾಗೂ ಇತರೆ ಸ್ವತ್ತುಗಳನ್ನು ನ್ಯಾಯಾಲಯ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ವಶಪಡಿಸಿಕೊಂಡಿತ್ತು.
ಈ ಚರಾಸ್ತಿಗಳನ್ನು ಬಿಡುಗಡೆ ಮಾಡಿದರೆ, ಅವುಗಳನ್ನು ಹರಾಜು ಹಾಕಿ ಸಾಲ ಮರುಪಾವತಿಗೆ ಬಳಸಿಕೊಳ್ಳುತ್ತೇವೆ ಎಂದು ಬ್ಯಾಂಕ್ಗಳ ಒಕ್ಕೂಟ ಈ ಮೊದಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.