ನವದೆಹಲಿ: ಕೇಂದ್ರ ಸರ್ಕಾರದ ಮಾಲೀಕತ್ವದಲ್ಲಿರುವ ಎರಡು ಬ್ಯಾಂಕ್ಗಳ ಖಾಸಗೀಕರಣ ವಿರೋಧಿಸಿ ಮಾರ್ಚ್ 15 ಮತ್ತು 16ರಂದು ಮುಷ್ಕರ ನಡೆಸುವಂತೆ ‘ಬ್ಯಾಂಕ್ ಸಂಘಟನೆಗಳ ಸಂಯುಕ್ತ ಒಕ್ಕೂಟ’ ಕರೆ ನೀಡಿದೆ. ಇದು ಒಂಭತ್ತು ಸಂಘಟನೆಗಳ ಒಕ್ಕೂಟ.
ಬ್ಯಾಂಕ್ ಖಾಸಗೀಕರಣ ಪ್ರಸ್ತಾವನೆಯನ್ನು ವಿರೋಧಿಸಲು ಮಂಗಳವಾರ ನಡೆದ ಒಕ್ಕೂಟದ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.