ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಮೀಸಲು ನಿಧಿ ಪ್ರಮಾಣ ನಿರ್ಧರಿಸಲುಮಾಜಿ ಗವರ್ನರ್ ಬಿಮಲ್ ಜಲನ್ ನೇತೃತ್ವದಪರಿಣತರ ಸಮಿತಿ ರಚನೆಯಾಗಿದೆ.
ಆರು ಸದಸ್ಯರ ಸಮಿತಿಯನ್ನು ರಚಿಸಲುಆರ್ಬಿಐ ಆಡಳಿತ ಬುಧವಾರ ನಿರ್ಧರಿಸಿತು. ಆರ್ಥಿಕ ವ್ಯವಹಾರಗಳ ಮಾಜಿ ಕಾರ್ಯದರ್ಶಿ ರಾಕೇಶ್ ಮೋಹನ್ ಅವರು ಉಪಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್, ಆರ್ಬಿಐ ಡೆಪ್ಯುಟಿ ಗವರ್ನರ್ ಎನ್.ಎಸ್. ವಿಶ್ವನಾಥನ್, ಆರ್ಬಿಐನ ಮಂಡಳಿ ಸದಸ್ಯರಾಗಿರುವ ಭರತ್ ದೋಷಿ ಮತ್ತು ಸುಧೀರ್ ಮಂಕಡ್ ಅವರು ಸಮಿತಿಯಲ್ಲಿನ ಸದಸ್ಯರಾಗಿದ್ದಾರೆ.
ಈ ಸಮಿತಿಯು ಸಭೆ ಸೇರಿದ 90 ದಿನಗಳ ಒಳಗಾಗಿ ವರದಿ ಸಲ್ಲಿಸಲಿದೆ. ಜಾಗತಿಕ ಮಟ್ಟದಲ್ಲಿ ಕೇಂದ್ರೀಯ ಬ್ಯಾಂಕ್ಗಳು ಹೊಂದಿರುವ ಮೀಸಲು ನಿಧಿಯ ಪ್ರಮಾಣವನ್ನು ಪರಿಶೀಲನೆ ನಡೆಸುವಂತೆ ತಿಳಿಸಲಾಗಿದೆ ಎಂದು ಆರ್ಬಿಐ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.