ದೇಶದ ಪ್ರಮುಖ ಪ್ಯಾಕ್ ಮಾಡಿದ ನೀರಿನ ಮಾರಾಟಗಾರ ಕಂಪನಿ ‘ಬಿಸ್ಲೆರಿ‘ಯನ್ನು ಖರೀದಿ ಮಾಡುವು ವ್ಯವಹಾರದಿಂದ ಟಾಟಾ ಸಮೂಹವು ಹಿಂದೆ ಸರಿದ ಬೆನ್ನಲ್ಲೇ ಇದೀಗ, ಬಿಸ್ಲೆರಿಯ ಸಂಸ್ಥಾಪಕ ರಮೇಶ್ ಚೌಹಾಣ್ ಅವರ ಪುತ್ರಿ ಜಯಂತಿ ಚೌಹಾಣ್ ಅವರು ಸಂಸ್ಥೆಯನ್ನು ಮುನ್ನಡೆಸಲಿದ್ದಾರೆ ಎಂದು ಕಂಪನಿ ಹೇಳಿದೆ.
ಉದ್ಯಮವನ್ನು ಮಾರಾಟ ಮಾಡುವ ಯಾವುದೇ ಉದ್ದೇಶ ಇಲ್ಲ. ಈ ಬಗ್ಗೆ ಯಾರ ಜತೆಯೂ ಮಾತುಕತೆ ನಡೆಸಿಲ್ಲ. ಸಿಇಒ ಏಂಜಲೋ ಜಾರ್ಜ್ ನೇತೃತ್ವದ ತಂಡ ಕಂಪನಿಯನ್ನು ಮುನ್ನಡೆಸಲಿದ್ದು, ತಮ್ಮ ಪುತ್ರಿ ಜಯಂತಿಯ ಉದ್ಯಮವನ್ನು ನೋಡಿಕೊಳ್ಳಲಿದ್ದಾರೆ ಎಂದು ರಮೇಶ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ‘ಎನ್ಡಿಟಿವಿ‘ ವರದಿ ಮಾಡಿದೆ.
ಸದ್ಯ ಜಯಂತಿಯವರು ಕಂಪನಿಯ ಉಪಾಧ್ಯಕ್ಷೆಯಾಗಿದ್ದು, ಕಳೆದ ಕೆಲವು ವರ್ಷಗಳಿಂದ ಉದ್ಯಮದ ಭಾಗವಾಗಿದ್ದಾರೆ.
ಕಂಪನಿಯನ್ನು ಮಾರಾಟ ಮಾಡಲು ರಮೇಶ್ ಅವರು ಕಳೆದ ನಾಲ್ಕು ತಿಂಗಳಿನಿಂದ ಟಾಟಾ ಕನ್ಸೂಮರ್ ಪ್ರಾಡೆಕ್ಟ್ ಲಿಮಿಟೆಡ್ ಜತೆ ಮಾತುಕತೆ ನಡೆಸಿದ್ದರು. ಇದೀಗ ಅವರ ಹೇಳಿಕೆಯಿಂದಾಗಿ ಮಾತುಕತೆ ಮುರಿದು ಬಿದ್ದಂತಾಗಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.