ADVERTISEMENT

ಕಪ್ಪುಹಣ ಘೋಷಣೆಗೆ ಯೋಜನೆ ಸಾಧ್ಯತೆ

ಅನ್ನಪೂರ್ಣ ಸಿಂಗ್
Published 13 ನವೆಂಬರ್ 2019, 2:17 IST
Last Updated 13 ನವೆಂಬರ್ 2019, 2:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ಈ ಬಾರಿನೇರ ತೆರಿಗೆ ಸಂಗ್ರಹವು ಅಂದಾಜಿಗಿಂತಲೂ ಕಡಿಮೆ ಆಗಲಿದೆ. ಹೀಗಾಗಿ ಕೇಂದ್ರ ಸರ್ಕಾರವು ತೆರಿಗೆ ತಪ್ಪಿಸುವವರಿಗೆ ‘ಆದಾಯ ಘೋಷಣೆ ಯೋಜನೆ’ಯನ್ನು (ಐಡಿಎಸ್‌) ಜಾರಿಗೊಳಿಸುವ ಸಾಧ್ಯತೆ ಇದೆ.

ತೆರಿಗೆ ಮತ್ತು ದಂಡ ಪಾವತಿಸುವ ಮೂಲಕ ಕಪ್ಪುಹಣ ಮತ್ತು ಅಕ್ರಮ ಆಸ್ತಿ ಘೋಷಣೆ ಮಾಡಿಕೊಳ್ಳಲು ಈ ಯೋಜನೆಯಲ್ಲಿ ಅವಕಾಶ ಲಭ್ಯವಾಗಲಿದೆ.

2016ರಲ್ಲಿ ಈ ಯೋಜನೆಯ ಮೂಲಕ ₹ 65 ಸಾವಿರ ಕೋಟಿ ಕಪ್ಪುಹಣ ಘೋಷಣೆಯಾಗಿತ್ತು.ಈ ಬಾರಿ ₹ 50 ಸಾವಿರ ಕೋಟಿ ಸಂಗ್ರಹವಾಗುವ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಇಟ್ಟುಕೊಂಡಿದೆ.

ADVERTISEMENT

ಕಳೆದ ಬಾರಿಶೇ 45ರಷ್ಟು ತೆರಿಗೆ ಮತ್ತು ದಂಡ ಕಟ್ಟಿ ಅಕ್ರಮ ಆಸ್ತಿ ಮತ್ತು ಕಪ್ಪುಹಣವನ್ನು ಸಕ್ರಮಗೊಳಿಸಿಕೊಳ್ಳಲು ಅವಕಾಶ ನೀಡಲಾಗಿತ್ತು.

ಹಲವು ವರ್ಷಗಳಿಂದ ‌ಬಹಳಷ್ಟು ಸಿರಿವಂತರು ತಮ್ಮ ನೈಜ ಆದಾಯ ಮತ್ತು ಆಸ್ತಿಗಳ ಮಾಹಿತಿಯನ್ನು ಘೋಷಿಸಿಕೊಂಡಿಲ್ಲ’ ಎಂದು ಅಧಿಕಾರಿ ಮೂಲಗಳು ಪ್ರಜಾವಾಣಿಗೆ ಮಾಹಿತಿ ನೀಡಿವೆ.

ನೇರ ತೆರಿಗೆ ಮೂಲಕ ₹ 13.35 ಲಕ್ಷ ಕೋಟಿ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಇದುವರೆಗೆ ₹ 5.2 ಲಕ್ಷ ಕೋಟಿ ಮಾತ್ರವೇ ಸಂಗ್ರಹವಾಗಿದೆ. ಏಪ್ರಿಲ್‌–ಸೆಪ್ಟೆಂಬರ್‌ ಅವಧಿಯಲ್ಲಿ ತೆರಿಗೆ ಸಂಗ್ರಹವು ಶೇ 3ರಷ್ಟು ಅಲ್ಪ ಪ್ರಗತಿ ಕಂಡಿದೆ.

ಜಿಎಸ್‌ಟಿ ಸಂಗ್ರಹದಲ್ಲಿ ಇಳಿಕೆ ಆಗುತ್ತಿರುವುದರಿಂದ ಒಟ್ಟಾರೆ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಬೀರುವ ಅಂದಾಜು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.