ADVERTISEMENT

ಆರ್ಥಿಕತೆಗೆ ಶೀಘ್ರವೇ ಇನ್ನೊಂದು ಕೊಡುಗೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2019, 19:54 IST
Last Updated 17 ಸೆಪ್ಟೆಂಬರ್ 2019, 19:54 IST
   

ನವದೆಹಲಿ: ದೇಶಿ ಆರ್ಥಿಕತೆಯ ಪುನಶ್ಚೇತನಕ್ಕೆ ನೆರವಾಗಲು ಕೇಂದ್ರ ಸರ್ಕಾರ ಸದ್ಯದಲ್ಲೇ ಇನ್ನೊಂದು ಕೊಡುಗೆ ನೀಡಲಿದೆ.

ಉತ್ತೇಜನಾ ಕೊಡುಗೆಯ ನೀಲನಕ್ಷೆ ಸಿದ್ಧಗೊಂಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶೀಘ್ರದಲ್ಲಿಯೇ ಈ ಕೊಡುಗೆ ಪ್ರಕಟಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರ ನೀಡಲಾಗಿಲ್ಲ.

ಸರ್ಕಾರ ಈಗಾಗಲೇ ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ಎಂಎಸ್‌ಎಂಇ), ರಿಯಲ್‌ ಎಸ್ಟೇಟ್‌ ಮತ್ತು ರಫ್ತು ವಲಯಕ್ಕೆ ಉತ್ತೇಜನಾ ಕೊಡುಗೆ ನೀಡಿದೆ. 10 ಬ್ಯಾಂಕ್‌ಗಳ ವಿಲೀನ ಪ್ರಕಟಿಸಿದೆ. ವಿದೇಶಿ ಹೂಡಿಕೆದಾರರ ಮೇಲಿನ ಸರ್ಚಾರ್ಜ್‌ ರದ್ದುಪಡಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.