ಮಥುರಾ: ಬಿಎಸ್ಎನ್ಎಲ್ ಉದ್ಯೋಗಿಗಳು ಮುಷ್ಕರವನ್ನು ತೀವ್ರಗೊಳಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಇದರಿಂದ ಬ್ಯಾಂಕ್ಗಳಿಗೆ ಅಂತರ್ಜಾಲ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಯದುವೀರ್ ಸಿಂಗ್ ತಿಳಿಸಿದ್ದಾರೆ.
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಿದ್ದ ಮೂರು ದಿನಗಳ ಮುಷ್ಕರ ಎರಡನೇ ದಿನವನ್ನು ಪೂರೈಸಿದೆ.
‘ಗ್ರಾಹಕರು, ಬ್ಯಾಂಕ್ಗಳ ಸೇವೆಗಳಿಗೆ ಅಡ್ಡಿಪಡಿಸುವುದಕ್ಕೆ ಸಹಮತ ಇಲ್ಲ’ ಎಂದು ಎಯುಎಬಿ ಸಂಚಾಲಕ ಪಿ. ಅಭಿಮನ್ಯು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.