ನವದೆಹಲಿ (ಪಿಟಿಐ): ಸರ್ಕಾರಿ ಸ್ವಾಮ್ಯದ ಕಂಪನಿಗಳು ತಮ್ಮ ಅಂಗಸಂಸ್ಥೆಗಳನ್ನು ಮುಚ್ಚುವ ಅಥವಾ ಅವುಗಳಲ್ಲಿನ ಬಂಡವಾಳವನ್ನು ಹಿಂದಕ್ಕೆ ಪಡೆಯುವುದಕ್ಕೆ ಸಂಬಂಧಿಸಿದ ತೀರ್ಮಾನವನ್ನು ಆಡಳಿತ ಮಂಡಳಿಗಳ ಮೂಲಕ ಕೈಗೊಳ್ಳಬಹುದು ಎಂದು ಕೇಂದ್ರ ಸಚಿವ ಸಂಪುಟ ಬುಧವಾರ ಹೇಳಿದೆ.
ಈಗಿನ ನಿಯಮಗಳ ಅನ್ವಯ, ಅಂಗಸಂಸ್ಥೆಗಳನ್ನು ಮುಚ್ಚಲು ಅಥವಾ ಅವುಗಳಲ್ಲಿನ ಬಂಡವಾಳ ಹಿಂತೆಗೆದುಕೊಳ್ಳಲು ಸಚಿವ ಸಂಪುಟದ ಅನುಮೋದನೆ ಬೇಕಿದೆ.
ಹೂಡಿಕೆ ಹಿಂತೆಗೆತ ಹಾಗೂ ಕಂಪನಿಯನ್ನು ಮುಚ್ಚುವ ಪ್ರಕ್ರಿಯೆಯು ಸ್ಪರ್ಧಾತ್ಮಕ ಬಿಡ್ಡಿಂಗ್ ಮತ್ತು ಕೆಲವು ಮಾರ್ಗಸೂಚಿಗಳನ್ನು ಆಧರಿಸಿ ನಡೆಯಬೇಕು. ಮಾರ್ಗಸೂಚಿಗಳನ್ನು ಇನ್ನಷ್ಟೇ ಹೊರಡಿಸಬೇಕಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.