ADVERTISEMENT

ಬಂಡವಾಳ ಸಂಗ್ರಹ: ಇದೇ 13ರಂದುಕೆನರಾ ಬ್ಯಾಂಕ್‌ ಆಡಳಿತ ಮಂಡಳಿ ಸಭೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2019, 18:22 IST
Last Updated 4 ಸೆಪ್ಟೆಂಬರ್ 2019, 18:22 IST

ನವದೆಹಲಿ: ಬಂಡವಾಳ ಸಂಗ್ರಹ, ಸಿಂಡಿಕೇಟ್‌ ಬ್ಯಾಂಕ್‌ ವಿಲೀನದ ನಿರ್ಧಾರಗಳ ಪರಿಶೀಲನೆ ನಡೆಸಲು ಕೆನರಾ ಬ್ಯಾಂಕ್‌ ಆಡಳಿತ ಮಂಡಳಿ ಸೆಪ್ಟೆಂಬರ್‌ 13ರಂದು ಸಭೆ ನಡೆಸಲಿದೆ.

ತನ್ನ ಬಳಿ ಇರುವಆದ್ಯತಾ ಷೇರುಗಳನ್ನು ಕೇಂದ್ರ ಸರ್ಕಾರಕ್ಕೆ ನೀಡುವ ಮೂಲಕ ₹ 9 ಸಾವಿರ ಕೋಟಿ ಸಂಗ್ರಹಿಸಲು ಮುಂದಾಗಿದೆ. ಈ ಬಗ್ಗೆ ಆಡಳಿತ ಮಂಡಳಿ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ.

ಕೇಂದ್ರ ಸರ್ಕಾರವು ಕಳೆದ ವಾರ 10 ಬ್ಯಾಂಕ್‌ಗಳನ್ನು ನಾಲ್ಕು ಬ್ಯಾಂಕ್‌ಗಳಲ್ಲಿ ವಿಲೀನಗೊಳಿಸುವ ನಿರ್ಧಾರ ಘೋಷಿಸಿದೆ. ಅದರಂತೆ, ಕೆನರಾ ಬ್ಯಾಂಕ್‌ನಲ್ಲಿ ಸಿಂಡಿಕೇಟ್‌ ಬ್ಯಾಂಕ್‌ ವಿಲೀನಗೊಳ್ಳಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.