ನವದೆಹಲಿ: ಬಂಡವಾಳ ಸಂಗ್ರಹ, ಸಿಂಡಿಕೇಟ್ ಬ್ಯಾಂಕ್ ವಿಲೀನದ ನಿರ್ಧಾರಗಳ ಪರಿಶೀಲನೆ ನಡೆಸಲು ಕೆನರಾ ಬ್ಯಾಂಕ್ ಆಡಳಿತ ಮಂಡಳಿ ಸೆಪ್ಟೆಂಬರ್ 13ರಂದು ಸಭೆ ನಡೆಸಲಿದೆ.
ತನ್ನ ಬಳಿ ಇರುವಆದ್ಯತಾ ಷೇರುಗಳನ್ನು ಕೇಂದ್ರ ಸರ್ಕಾರಕ್ಕೆ ನೀಡುವ ಮೂಲಕ ₹ 9 ಸಾವಿರ ಕೋಟಿ ಸಂಗ್ರಹಿಸಲು ಮುಂದಾಗಿದೆ. ಈ ಬಗ್ಗೆ ಆಡಳಿತ ಮಂಡಳಿ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ.
ಕೇಂದ್ರ ಸರ್ಕಾರವು ಕಳೆದ ವಾರ 10 ಬ್ಯಾಂಕ್ಗಳನ್ನು ನಾಲ್ಕು ಬ್ಯಾಂಕ್ಗಳಲ್ಲಿ ವಿಲೀನಗೊಳಿಸುವ ನಿರ್ಧಾರ ಘೋಷಿಸಿದೆ. ಅದರಂತೆ, ಕೆನರಾ ಬ್ಯಾಂಕ್ನಲ್ಲಿ ಸಿಂಡಿಕೇಟ್ ಬ್ಯಾಂಕ್ ವಿಲೀನಗೊಳ್ಳಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.