ಬೆಂಗಳೂರು: ಲಂಡನ್ನಿನಲ್ಲಿ ಈಚೆಗೆ ನಡೆದ ಜಾಗತಿಕ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಕೆನರಾ ಬ್ಯಾಂಕ್ಗೆ ಭಾರತ ವಿಭಾಗದಲ್ಲಿ 2022ನೆಯ ಸಾಲಿನ ‘ಬ್ಯಾಂಕರ್ಸ್ ಬ್ಯಾಂಕ್ ಆಫ್ ದಿ ಇಯರ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಎಲ್.ವಿ. ಪ್ರಭಾಕರ್ ಅವರು ಲಂಡನ್ನಿನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು ಎಂದು ಪ್ರಕಟಣೆ ತಿಳಿಸಿದೆ.
ಈ ಪ್ರಶಸ್ತಿಯು ಬ್ಯಾಂಕಿಂಗ್ ಉದ್ಯಮದ ಪಾಲಿಗೆ ಆಸ್ಕರ್ ಪ್ರಶಸ್ತಿ ಇದ್ದಂತೆ. ಪ್ರಶಸ್ತಿಯ ಮೂಲಕ ಕೆನರಾ ಬ್ಯಾಂಕ್ಅನ್ನು 2022ನೆಯ ಸಾಲಿನಲ್ಲಿ ಭಾರತದ ಅತ್ಯುತ್ತಮ ಬ್ಯಾಂಕ್ ಎಂದು ಪರಿಗಣಿಸಿದಂತಾಗಿದೆ ಎಂದು ಕೂಡ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.