ADVERTISEMENT

ಭಾರತದ ಆರ್ಥಿಕ ಹಿನ್ನಡೆಗೆ ಕಾರಣವಾಗಬಹುದು ಕೋವಿಡ್‌–19: ಆರ್‌ಬಿಐ ಗವರ್ನರ್‌ 

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2020, 12:51 IST
Last Updated 16 ಮಾರ್ಚ್ 2020, 12:51 IST
   

ನವದೆಹಲಿ: ಕೋವಿಡ್‌–19 ಭಾರತದ ಆರ್ಥಿಕ ಹಿನ್ನಡೆಗೆ ಕಾರಣವಾಬಹುದು ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‌ಐ ಜೊತೆಗೆ ಸೋಮವಾರ ಮಾತನಾಡಿರುವ ಅವರು, ‘ಕೊರೊನಾ ವೈರಸ್‌ ಮಹಾಮಾರಿಗೆ ಭಾರತ ಪ್ರತಿರೋಧಕ ಗುಣ ಹೊಂದಿಲ್ಲ. ಹೀಗಾಗಿ ದೇಶದಲ್ಲಿ ಈಗಾಗಲೇ 100ಕ್ಕೂ ಅಧಿಕ ಮಂದಿಗೆ ಸೋಂಕು ಉಂಟಾಗಿದೆ. ಇದರ ವಿರುದ್ಧ ಭಾರತ ಯುದ್ಧೋಪಾದಿಯಲ್ಲಿ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಭಾರತದ ವಾಣಿಜ್ಯ ಚಟುವಟಿಕೆ ಚೀನಾದೊಂದಿಗೆ ಹೆಚ್ಚಾಗಿ ಬೆಸೆದುಕೊಂಡಿದೆ. ಹೀಗಾಗಿ ಕೋವಿಡ್‌ ಭಾರತದ ಮೇಲೆ ನೇರವಾಗಿ ಪರಿಣಾಮ ಬೀರಬಲ್ಲದು,’ ಎಂದು ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆ.

‘ಮಹಾಮಾರಿಯ ಎರಡನೇ ಹಂತದ ಪರಿಣಾಮಗಳು ಆಂತರಿಕ ಬೆಳವಣಿಗೆಯ ಕುಸಿತದೊಂದಿಗೆ ಕಾಣಿಸುತ್ತವೆ. ಅಲ್ಲದೆ, ಇದು ಜಾಗತಿಕ ಆರ್ಥಿಕತೆಯನ್ನು ಕುಂಠಿತಗೊಳಿಸುತ್ತದೆ. ಇದರ ಪರಿಣಾಮವಾಗಿ ಭಾರತದ ಸದ್ಯದ ಆರ್ಥಿಕತೆಯ ಮೇಲೂ ಪರಿಣಾಮಗಳು ಬೀರುತ್ತವೆ,’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.