ನವದೆಹಲಿ: ಅನಿಯಂತ್ರಿತ ಠೇವಣಿ ಯೋಜನೆಗಳನ್ನು ನಿಷೇಧಿಸುವ ಮಸೂದೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸಚಿವ ಸಂಪುಟವು ಸಮ್ಮತಿ ನೀಡಿದೆ.
ವಂಚನೆ ಉದ್ದೇಶದ ಯೋಜನೆಗಳಿಂದ ಸುಲಭವಾಗಿ ಮೋಸ ಹೋಗುವ ಹೂಡಿಕೆದಾರರನ್ನು ರಕ್ಷಿಸುವ ಉದ್ದೇಶದಿಂದ ಈ ಸುಗ್ರೀವಾಜ್ಞೆ ಹೊರಡಿಸಲು ಉದ್ದೇಶಿಸಲಾಗಿದೆ.
ಉದ್ದೇಶಿತ ಸುಗ್ರೀವಾಜ್ಞೆಯು, ಅಕ್ರಮವಾಗಿ ಠೇವಣಿ ಸಂಗ್ರಹಿಸುವ ವಂಚಕರ ಪ್ರವೃತ್ತಿಗೆ ಕಡಿವಾಣ ಹಾಕಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.