ನವದೆಹಲಿ: ಪ್ರಸಕ್ತ ಹಣಕಾಸು ವರ್ಷಕ್ಕೆ ನಿಗದಿಪಡಿಸಲಾಗಿದ್ದ ಷೇರು ವಿಕ್ರಯದ ಗುರಿ ಮೀರಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
‘₹ 80 ಸಾವಿರ ಕೋಟಿಗಳಷ್ಟು ಷೇರು ವಿಕ್ರಯದ ಗುರಿ ನಿಗದಿಪಡಿಸಲಾಗಿತ್ತು. ಶುಕ್ರವಾರದ ಹೊತ್ತಿಗೆ ₹ 85 ಸಾವಿರ ಕೋಟಿ ಸಂಗ್ರಹಗೊಂಡಿದೆ’ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಟ್ವೀಟ್ ಮಾಡಿದ್ದಾರೆ.
ಕೇಂದ್ರೋದ್ಯಮಗಳ ಇಟಿಎಫ್ನ 5ನೇ ಕಂತಿನಿಂದ ₹ 9,500 ಕೋಟಿ ಸಂಗ್ರಹಗೊಂಡಿದೆ. ಸರ್ಕಾರಿ ಸ್ವಾಮ್ಯದ ಪವರ್ ಫೈನಾನ್ಸ್ ಕಾರ್ಪೊರೇಷನ್ (ಪಿಎಫ್ಸಿ), ರೂರಲ್ ಎಲೆಕ್ಟ್ರಿಫಿಕೇಷನ್ ಕಾರ್ಪೊರೇಷನ್ನಲ್ಲಿನ (ಆರ್ಇಸಿ) ಕೇಂದ್ರ ಸರ್ಕಾರದ ಶೇ 52.63 ಪಾಲು ಬಂಡವಾಳವನ್ನು ₹ 14,500 ಕೋಟಿಗೆ ಖರೀದಿಸಿದೆ. ಇದರಿಂದಾಗಿ ಗುರಿ ಮೀರಿದ ಸಾಧನೆ ಸಾಧ್ಯವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.