ನವದೆಹಲಿ: ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ಬ್ಯಾಂಕ್ಗಳಿಗೆ ವಂಚಿಸಿ ದೇಶಾಂತರ ತೆರಳಿರುವ ಪ್ರಕರಣಕ್ಕೆ ಸಂಬಂಧಿಸಿ ₹18,170.02 ಕೋಟಿ ಮೌಲ್ಯದ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ.
ಈ ಮೊತ್ತವು ಬ್ಯಾಂಕ್ಗಳಿಗೆ ಆದ ನಷ್ಟದ ಒಟ್ಟು ಮೊತ್ತದ ಶೇ 80.45ರಷ್ಟಾಗುತ್ತದೆ. ಹಣ ಅಕ್ರಮ ವರ್ಗಾವಣೆ ಪ್ರಕರಣ (ಪಿಎಂಎಲ್ಎ) ಅಡಿ ಈ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಪೈಕಿ, ₹9,371.17 ಕೋಟಿ ಮೌಲ್ಯದ ಸ್ವತ್ತುಗಳನ್ನು ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಟ್ವೀಟ್ ಮಾಡಿದೆ.
ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ತಮ್ಮ ಕಂಪನಿಗಳ ಮೂಲಕ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ಗಳನ್ನು ವಂಚಿಸಿದ್ದಾರೆ. ಇದರಿಂದಾಗಿ ಬ್ಯಾಂಕ್ಗಳಿಗೆ ಸುಮಾರು ₹22,585.83 ಕೋಟಿ ನಷ್ಟವಾಗಿದೆ ಎನ್ನಲಾಗಿದೆ.
ವಿದೇಶಗಳಲ್ಲಿರುವ ₹969 ಕೋಟಿ ಸೇರಿದಂತೆ ₹18,170.02 ಮೌಲ್ಯದ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ ತಕ್ಷಣ ಕ್ರಮ ಕೈಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.