ಮುಂಬೈ: ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧವಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಿಲಾಯನ್ಸ್ ಗ್ರೂಪ್ ಚೇರ್ಮೆನ್ ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯ ಸೋಮವಾರ ಸಮನ್ಸ್ ಕಳುಹಿಸಿದೆ.
ಯೆಸ್ ಬ್ಯಾಂಕ್ನಿಂದ ಸಾಲ ಪಡೆದ ಕಂಪನಿಗಳಲ್ಲಿ ಅನಿಲ್ ಅಂಬಾನಿಯವರಕಂಪನಿಯೂ ಸೇರಿದೆ. ಬಹುಮೊತ್ತದ ಸಾಲ ಪಡೆದ ಈ ಕಂಪನಿಗಳು ಬ್ಯಾಂಕ್ಗೆ ಸಾಲ ಮರುಪಾವತಿಸದ ಕಾರಣ ಬ್ಯಾಂಕ್ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿತ್ತು.
ಇದನ್ನೂ ಓದಿ:ಯೆಸ್ ಬ್ಯಾಂಕ್ ನಿರ್ಬಂಧ ಬುಧವಾರ ಅಂತ್ಯ
ಆದಾಗ್ಯೂ, ಆರೋಗ್ಯ ಸಮಸ್ಯೆಯಿಂದಾಗಿ ಜಾರಿ ನಿರ್ದೇಶನಾಲಯ ಹಾಜರಾಗುವ ದಿನಾಂಕದಲ್ಲಿ ವಿನಾಯಿತಿ ನೀಡಬೇಕು ಎಂದು ಅನಿಲ್ ಅಂಬಾನಿಕೇಳಿಕೊಂಡಿದ್ದು, ಹಾಜರಾಗಲಿರುವ ದಿನಾಂಕ ಬದಲಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.