ADVERTISEMENT

ಯೆಸ್ ಬ್ಯಾಂಕ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ಅಂಬಾನಿಗೆ ಇಡಿ ಸಮನ್ಸ್

ಪಿಟಿಐ
Published 16 ಮಾರ್ಚ್ 2020, 5:29 IST
Last Updated 16 ಮಾರ್ಚ್ 2020, 5:29 IST
ಅನಿಲ್ ಅಂಬಾನಿ
ಅನಿಲ್ ಅಂಬಾನಿ   

ಮುಂಬೈ: ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧವಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಿಲಾಯನ್ಸ್ ಗ್ರೂಪ್ ಚೇರ್‌ಮೆನ್ ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯ ಸೋಮವಾರ ಸಮನ್ಸ್ ಕಳುಹಿಸಿದೆ.

ಯೆಸ್ ಬ್ಯಾಂಕ್‌ನಿಂದ ಸಾಲ ಪಡೆದ ಕಂಪನಿಗಳಲ್ಲಿ ಅನಿಲ್ ಅಂಬಾನಿಯವರಕಂಪನಿಯೂ ಸೇರಿದೆ. ಬಹುಮೊತ್ತದ ಸಾಲ ಪಡೆದ ಈ ಕಂಪನಿಗಳು ಬ್ಯಾಂಕ್‌ಗೆ ಸಾಲ ಮರುಪಾವತಿಸದ ಕಾರಣ ಬ್ಯಾಂಕ್ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿತ್ತು.

ಆದಾಗ್ಯೂ, ಆರೋಗ್ಯ ಸಮಸ್ಯೆಯಿಂದಾಗಿ ಜಾರಿ ನಿರ್ದೇಶನಾಲಯ ಹಾಜರಾಗುವ ದಿನಾಂಕದಲ್ಲಿ ವಿನಾಯಿತಿ ನೀಡಬೇಕು ಎಂದು ಅನಿಲ್ ಅಂಬಾನಿಕೇಳಿಕೊಂಡಿದ್ದು, ಹಾಜರಾಗಲಿರುವ ದಿನಾಂಕ ಬದಲಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.