ADVERTISEMENT

ಐಎಂಎಫ್‌ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸುಬ್ರಮಣಿಯನ್ ನೇಮಕ

ಪಿಟಿಐ
Published 25 ಆಗಸ್ಟ್ 2022, 16:18 IST
Last Updated 25 ಆಗಸ್ಟ್ 2022, 16:18 IST
 ಕೆ. ಸುಬ್ರಮಣಿಯನ್
ಕೆ. ಸುಬ್ರಮಣಿಯನ್    

ನವದೆಹಲಿ: ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರನ್ನು ಅಂತರರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯನಿರ್ವಾಹಕ ನಿರ್ದೇಶಕ (ಭಾರತ) ಆಗಿ ಗುರುವಾರ ನೇಮಕ ಮಾಡಲಾಗಿದೆ.

ಕೇಂದ್ರ ಸಚಿವ ಸಂಪುಟದ ನೇಮಕಾತಿಗಳ ಸಮಿತಿಯು ಸುಬ್ರಮಣಿಯನ್ ಅವರ ನೇಮಕಕ್ಕೆ ಒಪ್ಪಿಗೆ ನೀಡಿದೆ ಎಂದು ಸಿಬ್ಬಂದಿ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಈ ನೇಮಕವು ನವೆಂಬರ್ 1ರಿಂದ, ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT