ADVERTISEMENT

ಜಿಎಸ್‌ಟಿ ಪರಿಹಾರ ಮೊತ್ತ ಭರ್ತಿಗೆ ಸಾಲ: ರಾಜ್ಯಗಳಿಗೆ ನಿರ್ಮಲಾ ಪತ್ರ

ಪಿಟಿಐ
Published 16 ಅಕ್ಟೋಬರ್ 2020, 19:32 IST
Last Updated 16 ಅಕ್ಟೋಬರ್ 2020, 19:32 IST
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್   

ನವದೆಹಲಿ: ಜಿಎಸ್‌ಟಿ ಪರಿಹಾರ ಮೊತ್ತ ಭರ್ತಿಗೆ ರಾಜ್ಯಗಳ ಪರವಾಗಿ ತಾನೇ ಸಾಲ ಮಾಡುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸಿದ ಮಾರನೆಯ ದಿನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಗಳಿಗೆ ಪತ್ರ ಬರೆದಿದ್ದಾರೆ.

ಜಿಎಸ್‌ಟಿ ಪರಿಹಾರ ಮೊತ್ತವನ್ನು ನೀಡಲು ಸಂಗ್ರಹಿಸುತ್ತಿದ್ದ ಸೆಸ್‌ನಿಂದಲೇ, ಸಾಲದ ಅಸಲು ಮತ್ತು ಬಡ್ಡಿಯನ್ನು ತೀರಿಸಲಾಗುತ್ತದೆ.

ಕೇಂದ್ರದ ಕ್ರಮವನ್ನು ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಸ್ವಾಗತಿಸಿದ್ದಾರೆ. ‘ಮೊದಲ ಹೆಜ್ಜೆ, ಸರಿಯಾದ ಹೆಜ್ಜೆ’ ಎಂದು
ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.