ADVERTISEMENT

ಎಫ್‌ಕೆಸಿಸಿಐ ಹೊಸ ಪದಾಧಿಕಾರಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2021, 16:32 IST
Last Updated 23 ಅಕ್ಟೋಬರ್ 2021, 16:32 IST
ರಮೇಶ್‌ಚಂದ್ರ ಲಹೋಟಿ
ರಮೇಶ್‌ಚಂದ್ರ ಲಹೋಟಿ   

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್‌ಕೆಸಿಸಿಐ) 2021–22ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಶುಕ್ರವಾರ ಚುನಾವಣೆ ನಡೆದಿದ್ದು, ಡಾ.ಐ.ಎಸ್. ಪ್ರಸಾದ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಿ.ವಿ. ಗೋಪಾಲ ರೆಡ್ಡಿ ಅವರು ಹಿರಿಯ ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

ಸಂಸ್ಥೆಯ ಉಪಾಧ್ಯಕ್ಷರಾಗಿ ರಮೇಶ್‌ಚಂದ್ರ ಲಹೋಟಿ ಆಯ್ಕೆ ಆಗಿದ್ದಾರೆ. ಡಾ. ಪ್ರಸಾದ್ ಅವರು ಇಪ್ಪತ್ತೈದು ವರ್ಷಗಳಿಗಿಂತ ಹೆಚ್ಚಿನ ಅವಧಿಯಿಂದ ಎಫ್‌ಕೆಸಿಸಿಐ ಸದಸ್ಯರಾಗಿದ್ದಾರೆ. ಈ ಹಿಂದೆ ಅವರು ಸಂಸ್ಥೆಯ ಉಪಾಧ್ಯಕ್ಷ ಹಾಗೂ ಹಿರಿಯ ಉಪಾಧ್ಯಕ್ಷ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಅವರು ವೃತ್ತಿಯಿಂದ ಲೆಕ್ಕಪರಿಶೋಧಕ.

ರೆಡ್ಡಿ ಅವರು ಈ ಹಿಂದೆ ಸಂಸ್ಥೆಯ ಉಪಾಧ್ಯಕ್ಷರಾಗಿ ಕರ್ತವ್ಯ ನಿಭಾಯಿಸಿದ್ದಾರೆ. ಲಹೋಟಿ ಅವರು ಸಂಸ್ಥೆಯ ಬೇರೆ ಬೇರೆ ಸಮಿತಿಗಳಲ್ಲಿ ಕರ್ತವ್ಯ ನಿಭಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.