ನವದೆಹಲಿ:ಬಿಎಸ್ ಎನ್ಎಲ್ ಉದ್ಯೋಗಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ರಚನಾತ್ಮಕ ಕ್ರಮಗಳನ್ನು ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ.
ಸೋಮವಾರದಿಂದ (ಫೆ. 18) 3 ದಿನ ಮುಷ್ಕರ ನಡೆಸಲು ನಿಗಮದ ಉದ್ಯೋಗಿಗಳ ಸಂಘಟನೆಗಳು ಕರೆ ನೀಡಿವೆ. ನಿಗಮದ ಪುನಶ್ಚೇತನದ ಸಮಗ್ರ ಪ್ರಸ್ತಾವ ಸಿದ್ಧಪಡಿಸಲಾಗಿದ್ದು ಶೀಘ್ರದಲ್ಲಿಯೇ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದೂ ದೂರಸಂಪರ್ಕ ಸಚಿವಾಲಯ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.