ADVERTISEMENT

ದಿವಾಳಿ ಸಂಹಿತೆ ತಿದ್ದುಪಡಿಗೆ ಸಮ್ಮತಿ

ಕೇಂದ್ರ ಸಚಿವ ಸಂಪುಟದ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 18 ಜುಲೈ 2019, 5:34 IST
Last Updated 18 ಜುಲೈ 2019, 5:34 IST

ನವದೆಹಲಿ (ಪಿಟಿಐ): ವಸೂಲಾಗದ ಸಾಲದ ಪ್ರಕರಣಗಳನ್ನು ಕಾಲಮಿತಿ ಒಳಗೆ ಇತ್ಯರ್ಥಪಡಿಸಲು ನೆರವಾಗಲು ದಿವಾಳಿ ಸಂಹಿತೆ ಕಾಯ್ದೆಗೆ ತಿದ್ದುಪಡಿ ತರಲಾಗಿದೆ.

ಹಣಕಾಸು ಪರಿಸ್ಥಿತಿ ಮತ್ತು ದಿವಾಳಿ ಸಂಹಿತೆಗೆ (ಐಬಿಸಿ) ಏಳು ತಿದ್ದುಪಡಿ ತರುವುದಕ್ಕೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ. ವಸೂಲಾಗದ ಸಾಲದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಇದರಿಂದ ಸಾಧ್ಯ
ವಾಗಲಿದೆ. ಗರಿಷ್ಠ 330 ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲು ಕಾಲಮಿತಿ ವಿಧಿಸಲಾಗಿದೆ.

ಕಾರ್ಪೊರೇಟ್‌ಗಳು ಬಾಕಿ ಉಳಿಸಿಕೊಂಡಿರುವ ಸಾಲಕ್ಕೆ ಪರಿಹಾರ ಕಂಡುಕೊಳ್ಳುವ ಮತ್ತು ಈ ಪ್ರಕ್ರಿಯೆಯಿಂದ ಗರಿಷ್ಠ ಮೊತ್ತ ವಸೂಲಿ ಮಾಡುವುದಕ್ಕೆ ಇದ್ದ ಪ್ರಮುಖ ಲೋಪ ಸರಿಪಡಿಸಲು ಈ ತಿದ್ದುಪಡಿಗಳು ನೆರವಾಗಲಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.