ADVERTISEMENT

ಸಾಲಗಾರರ ವಿರುದ್ಧ ಕಠಿಣ ಕ್ರಮ ಬೇಡ: ನಿರ್ಮಲಾ ಸೀತಾರಾಮನ್

ಪಿಟಿಐ
Published 24 ಜುಲೈ 2023, 16:21 IST
Last Updated 24 ಜುಲೈ 2023, 16:21 IST
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್    

ನವದೆಹಲಿ: ಸಾಲ ಮರುಪಾವತಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಖಾಸಗಿ ಹಾಗೂ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನಿರ್ಮಲಾ ಅವರು ಲೋಕಸಭೆಯಲ್ಲಿ ಈ ವಿಚಾರ ತಿಳಿಸಿದ್ದಾರೆ. ‘ಕೆಲವು ಬ್ಯಾಂಕ್‌ಗಳು ಸಾಲದ ಮರುಪಾವತಿಯ ವಿಚಾರದಲ್ಲಿ ಅದೆಷ್ಟು ನಿರ್ದಾಕ್ಷಿಣ್ಯವಾಗಿ ವರ್ತಿಸಿವೆ ಎಂಬ ಬಗ್ಗೆ ನಾನು ದೂರುಗಳನ್ನು ಕೇಳಿದ್ದೇನೆ. ಸಾಲ ಮರುಪಾವತಿಗೆ ಸಂಬಂಧಿಸಿದ ವಿಚಾರದಲ್ಲಿ ಬ್ಯಾಂಕ್‌ಗಳು ಮಾನವೀಯವಾಗಿ, ಸ್ಪಂದನಶೀಲವಾಗಿ ವರ್ತಿಸಬೇಕು ಎಂದು ಸೂಚನೆ ನೀಡಲಾಗಿದೆ’ ಎಂದು ನಿರ್ಮಲಾ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT