ADVERTISEMENT

ಪ್ರಸಕ್ತ ಹಣಕಾಸು ವರ್ಷದಲ್ಲೇ ಎಲ್‌ಐಸಿ ಐಪಿಒ: ಭಾಗವತ್ ಕೃಷ್ಣರಾವ್

ಪಿಟಿಐ
Published 19 ಜುಲೈ 2021, 16:22 IST
Last Updated 19 ಜುಲೈ 2021, 16:22 IST

ನವದೆಹಲಿ: ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಐಪಿಒ ಪ್ರಕ್ರಿಯೆಯನ್ನುಪ್ರಸಕ್ತ ಹಣಕಾಸು ವರ್ಷದಲ್ಲಿಯೇ ಪೂರ್ಣಗೊಳಿಸುವ ಇರಾದೆಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕೃಷ್ಣರಾವ್ ಕರಾಡ್ ಅವರು ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ಷೇರು ವಿಕ್ರಯ ಗುರಿ ತಲುಪಲು ಎಲ್‌ಐಸಿ ಐಪಿಒ ಬಹಳ ಮುಖ್ಯವಾಗಿದೆ. ಹಲವು ಕಂಪನಿಗಳ ಷೇರುವಿಕ್ರಯವು ಈ ವರ್ಷದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಕರಾಡ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT