ಬೆಂಗಳೂರು: ಜಿಆರ್ಟಿ ಜುವೆಲರ್ಸ್ ಕಂಪನಿಯು ‘ಸ್ವರ್ಣ ಅವತಾರ’ ಎನ್ನುವ ಹೊಸ ಕೊಡುಗೆಯನ್ನು ಘೋಷಿಸಿದೆ. ಇದರಂತೆ, ಗ್ರಾಹಕರು ತಮ್ಮ ಹಳೆಯ ಚಿನ್ನವನ್ನು ವಿನಿಮಯ ಮಾಡುವಾಗ ಪ್ರತಿ ಗ್ರಾಂಗೆ ₹50 ಹೆಚ್ಚಾಗಿ ಪಡೆಯಬಹುದಾಗಿದೆ. ಈ ಕೊಡುಗೆಯು ಸೀಮಿತ ಅವಧಿಗೆ ಮಾತ್ರವೇ ಇರಲಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.
‘ನಮ್ಮ ಗ್ರಾಹಕರ ಸಂತೋಷವನ್ನು ಹೆಚ್ಚಿಸಲು ಹಲವು ಹೊಸ ಕೊಡುಗೆಗಳನ್ನು ಪರಿಚಯಿಸುತ್ತಿರುತ್ತೇವೆ. ಈ ಕೊಡುಗೆಯಲ್ಲಿ ಗ್ರಾಹಕರು ತಮ್ಮ ಹಳೆಯ ಚಿನ್ನವನ್ನು ವಿನಿಮಯ ಮಾಡಿಕೊಂಡು, ತಮಗೆ ಇಷ್ಟವಾದ ವಿನ್ಯಾಸದ ಆಭರಣಗಳನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ ಎನ್ನುವ ನಂಬಿಕೆ ಇದೆ’ ಎಂದು ಜಿಆರ್ಟಿ ಜುವೆಲರ್ಸ್ನ ವ್ಯವಸ್ಥಾಪಕ ನಿರ್ದೇಶಕ ಅನಂತ ಪದ್ಮನಾಭನ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.