ADVERTISEMENT

ರಾಜ್ಯಗಳಿಗೆ ಪರಿಹಾರ: ಜಿಎಸ್‌ಟಿ ಮಂಡಳಿ ಚರ್ಚೆ?

ಪಿಟಿಐ
Published 27 ಜೂನ್ 2022, 15:44 IST
Last Updated 27 ಜೂನ್ 2022, 15:44 IST

ನವದೆಹಲಿ: ರಾಜ್ಯಗಳಿಗೆ ವರಮಾನ ನಷ್ಟವನ್ನು ತುಂಬಿಕೊಡುವುದು ಹೇಗೆ, ಕೆಲವು ಉತ್ಪನ್ನಗಳ ಮೇಲಿನ ತೆರಿಗೆ ಪ್ರಮಾಣದಲ್ಲಿ ಯಾವ ಬದಲಾವಣೆ ಆಗಬೇಕು ಎಂಬ ಬಗ್ಗೆ ಮಂಗಳವಾರದಿಂದ ಶುರುವಾಗುವ ಜಿಎಸ್‌ಟಿ ಮಂಡಳಿಯ ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆ ಇದೆ.

ಆನ್‌ಲೈನ್‌ ಆಟಗಳು, ಕ್ಯಾಸಿನೊ, ಕುದುರೆ ರೇಸ್‌ ಮೇಲೆ ಶೇಕಡ 28ರಷ್ಟು ತೆರಿಗೆ ವಿಧಿಸುವ ಪ್ರಸ್ತಾವನೆಗೆ ಮಂಡಳಿಯು ಒಪ್ಪಿಗೆ ನೀಡುವ ಸಾಧ್ಯತೆ ಇದೆ.

ಜಿಎಸ್‌ಟಿ ವ್ಯವಸ್ಥೆಯ ಅಡಿಯಲ್ಲಿ ರಾಜ್ಯಗಳಿಗೆ ಆಗುವ ವರಮಾನ ನಷ್ಟವನ್ನು ಕೇಂದ್ರವು ಭರ್ತಿ ಮಾಡಿಕೊಡುವ ವ್ಯವಸ್ಥೆಯು ಜೂನ್ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಆದರೆ, ಈ ವ್ಯವಸ್ಥೆಯನ್ನು ಮುಂದುವರಿಸಬೇಕು ಎಂದು ಬಿಜೆಪಿಯ ವಿರೋಧ ಪಕ್ಷಗಳ ಆಡಳಿತ ಇರುವ ರಾಜ್ಯ ಸರ್ಕಾರಗಳು ಬಲವಾಗಿ ಆಗ್ರಹಿಸುತ್ತಿವೆ. ಹೀಗಾಗಿ, ಪರಿಹಾರ ವಿಚಾರವಾಗಿ ಬಿರುಸಿನ ಚರ್ಚೆ ನಡೆಯುವ ಸಾಧ್ಯತೆ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.