ADVERTISEMENT

ಮೂರನೆಯ ತ್ರೈಮಾಸಿಕದಲ್ಲಿ ಬ್ಯಾಂಕುಗಳಿಗೆ ನೆರವು ಸಾಧ್ಯತೆ

ಪಿಟಿಐ
Published 27 ಸೆಪ್ಟೆಂಬರ್ 2020, 17:21 IST
Last Updated 27 ಸೆಪ್ಟೆಂಬರ್ 2020, 17:21 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕುಗಳಿಗೆ ಕೇಂದ್ರ ಸರ್ಕಾರವು ಮೂರನೆಯ ತ್ರೈಮಾಸಿಕದಲ್ಲಿಯೇ ಹಣಕಾಸಿನ ನೆರವು ಒದಗಿಸುವ ಸಾಧ್ಯತೆ ಇದೆ. ಈ ಉದ್ದೇಶಕ್ಕಾಗಿ ಕೇಂದ್ರ ಹಣಕಾಸು ಸಚಿವಾಲಯವು ₹ 20 ಸಾವಿರ ಕೋಟಿಯ ನಿಧಿಗೆ ಸಂಸತ್ತಿನ ಒಪ್ಪಿಗೆ ಪಡೆದುಕೊಂಡಿದೆ.

ಅಕ್ಟೋಬರ್–ಡಿಸೆಂಬರ್ ತ್ರೈಮಾಸಿಕದಲ್ಲಿ ಅಗತ್ಯ ಎದುರಾದರೆ ಶಾಸನಬದ್ಧ ಬಂಡವಾಳ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ನೆರವು ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಯಾವ ಬ್ಯಾಂಕಿಗೆ ಶಾಸನಬದ್ಧ ಬಂಡವಾಳದ ಅಗತ್ಯ ಎದುರಾಗಬಹುದು ಎಂಬುದನ್ನು ಬ್ಯಾಂಕುಗಳ ಎರಡನೆಯ ತ್ರೈಮಾಸಿಕದ ಫಲಿತಾಂಶವು ತಿಳಿಸುತ್ತದೆ. ಅದಕ್ಕೆ ಅನುಗುಣವಾಗಿ ಪುನರ್ಧನ ಬಾಂಡ್‌ಗಳನ್ನು ಬ್ಯಾಂಕುಗಳಿಗೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಇದಲ್ಲದೆ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈಕ್ವಿಟಿ ಮತ್ತು ಬಾಂಡ್‌ಗಳ ಮೂಲಕ ಬಂಡವಾಳ ಸಂಗ್ರಹಿಸಲು ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಷೇರುದಾರರ ಅನುಮತಿ ಸಿಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.