ನವದೆಹಲಿ: ದೇಶದಲ್ಲಿ ಬೆಲೆ ಏರಿಕೆ ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಮೇ 13ರಂದು ಗೋಧಿ ರಫ್ತನ್ನು ನಿಷೇಧಿಸಿತ್ತು. ಆದಾಗ್ಯೂ, ಆ ಬಳಿಕ ಇಲ್ಲಿಯವರೆಗೆ 18 ಲಕ್ಷ ಟನ್ ಗೋಧಿ ರಫ್ತು ಮಾಡಲಾಗಿದೆ.
ಈ ಕುರಿತು ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಮಾಹಿತಿ ನೀಡಿದ್ದಾರೆ.
‘ಜಾಗತಿಕ ಆಹಾರ ಭದ್ರತೆಗಾಗಿ ಒಗ್ಗೂಡುವಿಕೆ’ ಎಂಬ ವಿಷಯದಲ್ಲಿ ಜರ್ಮನಿಯ ಬರ್ಲಿನ್ನಲ್ಲಿ ನಡೆದ ಸಚಿವರ ಸಮಾವೇಶದಲ್ಲಿ ಅವರು ಮಾತನಾಡಿದರು.
ಮಾನವೀಯತೆಯ ಆಧಾರದಲ್ಲಿ ಅಫ್ಗಾನಿಸ್ತಾನಕ್ಕೆ 50,000 ಟನ್ ಗೋಧಿ ಕಳುಹಿಸಿಕೊಡಲು ನಿರ್ಧರಿಸಲಾಗಿತ್ತು. ಈ ಪೈಕಿ 33,000 ಟನ್ ಗೋಧಿಯನ್ನು ಈಗಾಗಲೇ ಕಳುಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
‘138 ಕೋಟಿ ಜನರನ್ನು ಪೋಷಿಸಬೇಕಾದ ಮಹತ್ವದ ಜವಾಬ್ದಾರಿ ನಡುವೆಯೂ ಭಾರತವು ಸದಾ ಜಾಗತಿಕ ಅಗತ್ಯತೆಗಳನ್ನು ಗಣನೆಗೆ ತೆಗೆದುಕೊಂಡಿದೆ’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.