ADVERTISEMENT

ಹಣದುಬ್ಬರ ನಿಯಂತ್ರಿಸಲು ರಷ್ಯಾ ತೈಲ ಆಮದು: ನಿರ್ಮಲಾ ಸೀತಾರಾಮನ್

ರಾಯಿಟರ್ಸ್
Published 8 ಸೆಪ್ಟೆಂಬರ್ 2022, 10:38 IST
Last Updated 8 ಸೆಪ್ಟೆಂಬರ್ 2022, 10:38 IST
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್   

ನವದೆಹಲಿ: ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿರುವುದು ಹಣದುಬ್ಬರವನ್ನು ನಿಯಂತ್ರಿಸುವ ಕಾರ್ಯತಂತ್ರದ ಒಂದು ಭಾಗ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬೇರೆ ದೇಶಗಳೂ ಈ ಬಗೆಯ ಕಾರ್ಯತಂತ್ರದ ಮೊರೆ ಹೋಗಿವೆ ಎಂದು ಅವರು ತಿಳಿಸಿದ್ದಾರೆ.

ಭಾರತವು ಆಮದು ಮಾಡಿಕೊಳ್ಳುವ ಕಚ್ಚಾ ತೈಲದಲ್ಲಿ ರಷ್ಯಾದ ಪಾಲು ಫೆಬ್ರುವರಿಗೆ ಮೊದಲು ಶೇಕಡ 2ರಷ್ಟು ಇತ್ತು. ಅದು ಈಗ ಶೇ 12ರಿಂದ ಶೇ 13ಕ್ಕೆ ಏರಿಕೆ ಆಗಿದೆ ಎಂದು ನಿರ್ಮಲಾ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT