ADVERTISEMENT

ಉಕ್ರೇನ್‌ ಬಿಕ್ಕಟ್ಟು: ರಫ್ತು ಬಗ್ಗೆ ನಿರ್ಮಲಾ ಸೀತಾರಾಮನ್‌ ಆತಂಕ

ರಾಯಿಟರ್ಸ್
Published 28 ಫೆಬ್ರುವರಿ 2022, 14:36 IST
Last Updated 28 ಫೆಬ್ರುವರಿ 2022, 14:36 IST
ರ್ಮಲಾ ಸೀತಾರಾಮನ್‌
ರ್ಮಲಾ ಸೀತಾರಾಮನ್‌   

ನವದೆಹಲಿ: ಉಕ್ರೇನ್‌ ಬಿಕ್ಕಟ್ಟಿನಿಂದಾಗಿ ರಫ್ತು ವಹಿವಾಟಿನ ಮೇಲೆ ದುಷ್ಪರಿಣಾಮ ಉಂಟಾಗಬಹುದು ಎನ್ನುವ ಆತಂಕವು ಭಾರತಕ್ಕೆ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸೋಮವಾರ ಹೇಳಿದ್ದಾರೆ.

ಬಿಕ್ಕಟ್ಟಿನಿಂದಾಗಿ ಪಾವತಿ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಎದುರಾಗಿವೆಯೇ ಎನ್ನುವ ಬಗ್ಗೆ ಉದ್ಯಮ ವಲಯದ ಪ್ರತಿಕ್ರಿಯೆಯನ್ನೂ ಅವರು ಹೇಳಿದ್ದಾರೆ. ಔಷಧವಸ್ತುಗಳ ರಫ್ತು ಮತ್ತು ರಾಸಾಯನಿಕ ಆಮದು ಕುರಿತು ಕಳವಳ ಇರುವುದಾಗಿ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.