ADVERTISEMENT

ಚಿನ್ನಾಭರಣ ಉದ್ಯಮ ಉದ್ಯೋಗ ನಷ್ಟದ ಆತಂಕ: ಜಿಜೆಸಿ

ಪಿಟಿಐ
Published 9 ಸೆಪ್ಟೆಂಬರ್ 2019, 19:45 IST
Last Updated 9 ಸೆಪ್ಟೆಂಬರ್ 2019, 19:45 IST
   

ಕೋಲ್ಕತ್ತ: ಚಿನ್ನಾಭರಣ ಉದ್ಯಮವು ಆರ್ಥಿಕ ಹಿಂಜರಿತದ ಪರಿಣಾಮಗಳನ್ನು ಎದುರಿಸುತ್ತಿದ್ದು, ಉದ್ಯೋಗ ನಷ್ಟದ ಆತಂಕಕ್ಕೆ ಒಳಗಾಗಿದೆ ಎಂದು ಅಖಿಲ ಭಾರತ ಹರಳು ಮತ್ತು ಚಿನ್ನಾಭರಣ ಸಮಿತಿ (ಜಿಜೆಸಿ) ಹೇಳಿದೆ.

‘ಬೇಡಿಕೆ ಇಲ್ಲದೇ ಇರುವುದರಿಂದ ಮಾರಾಟದಲ್ಲಿ ಇಳಿಕೆಯಾಗುತ್ತಿದೆ. ಸಾವಿರಾರು ಕುಶಲ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ’ ಎಂದು ಸಮಿತಿಯ ಉಪಾಧ್ಯಕ್ಷ ಶಂಕರ್‌ ಸೇನ್‌ ತಿಳಿಸಿದ್ದಾರೆ.

‘ಚಿನ್ನದ ಆಮದು ಮೇಲಿನ ಕಸ್ಟಮ್ಸ್‌ ಸುಂಕವನ್ನು ಶೇ 10ಕ್ಕೆ ತಗ್ಗಿಸಬೇಕು ಮತ್ತು ಚಿನ್ನಾಭರಣಗಳ ಮೇಲಿನ ಜಿಎಸ್‌ಟಿಯನ್ನು ಶೇ 1ಕ್ಕೆ ನಿಗದಿಪಡಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ADVERTISEMENT

2019–20ರ ಕೇಂದ್ರ ಬಜೆಟ್‌ನಲ್ಲಿ ಕಸ್ಟಮ್ಸ್‌ ಸುಂಕವನ್ನು ಶೇ 10 ರಿಂದ ಶೇ 12.5ಕ್ಕೆ ಹೆಚ್ಚಿಸಲಾಗಿದೆ. ಜಿಎಸ್‌ಟಿ ಜಾರಿಗೆ ಬಂದ ಬಳಿಕ ಚಿನ್ನಾಭರಣಗಳ ಮೇಲಿನ ತೆರಿಗೆಯನ್ನು ಶೇ 3ಕ್ಕೆ ಏರಿಕೆ ಮಾಡಲಾಗಿದೆ. ವ್ಯಾಟ್‌ ಜಾರಿಯಲ್ಲಿದ್ದಾಗ ಶೇ 1ರಷ್ಟಿತ್ತು.

ಚಿನ್ನಾಭರಣ ಖರೀದಿಗೆ ಮಾಸಿಕ ಸಮಾನ ಕಂತು (ಇಎಂಐ) ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.