ನವದೆಹಲಿ: ಕಲ್ಯಾಣ್ ಜುವೆಲರ್ಸ್ ಇಂಡಿಯಾ ಕಂಪನಿಯು ಮಾಜಿ ಮಹಾಲೇಖಪಾಲ (ಸಿಎಜಿ) ವಿನೋದ್ ರಾಯ್ ಅವರನ್ನು ಅಧ್ಯಕ್ಷ ಮತ್ತು ಸ್ವತಂತ್ರ ಕಾರ್ಯನಿರ್ವಾಹಕೇತರ ನಿರ್ದೇಶಕರನ್ನಾಗಿ ನೇಮಿಸಿದೆ.
ಈ ನೇಮಕಕ್ಕೆ ಷೇರುದಾರರು ಮತ್ತು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಒಪ್ಪಿಗೆ ದೊರೆಯಬೇಕಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.
ಟಿ.ಎಸ್. ಕಲ್ಯಾಣ್ ಅವರು ವ್ಯವಸ್ಥಾಪಕ ನಿರ್ದೇಶಕರಾಗಿ ಕಂಪನಿಯ ಆಡಳಿತ ಮಂಡಳಿಯಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.