ಮಂಗಳೂರು: ಬಂಡವಾಳ ಪರ್ಯಾಪ್ತತಾ ಅನುಪಾತವೇ ಬ್ಯಾಂಕ್ಗಳ ಸುರಕ್ಷತೆಯ ಮಾನದಂಡ ಎಂದು ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ಸ್ಪಷ್ಟಪಡಿಸಿದ್ದಾರೆ.
‘ವಿದೇಶಗಳಲ್ಲಿ ‘ಬಂಡವಾಳ ಪರ್ಯಾಪ್ತತಾ ಅನುಪಾತ’ಕ್ಕೆ ಬ್ಯಾಂಕಿನ ಮುಂಗಡ, ಹೂಡಿಕೆ ಇತ್ಯಾದಿಗಳ ಸುರಕ್ಷತೆಯ ಆಧಾರದ ಮೇಲೆ ಕನಿಷ್ಠ ಶೇ 8ರ ಮಾನದಂಡವನ್ನು ಪಾಲಿಸುತ್ತಿದ್ದರೆ, ಭಾರತದಲ್ಲಿ ಕನಿಷ್ಠ ಶೇ 9ರ ಅನುಪಾತವನ್ನು ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದೆ. ಆದರೆ ಕರ್ಣಾಟಕ ಬ್ಯಾಂಕ್ ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದ ಶೇ 9ರ ಅನುಪಾತಕ್ಕೆ ಇನ್ನೂ ಶೇ 1 ಹೆಚ್ಚಾಗಿಯೇ ಇದೆ’ ಎಂದು ಅವರು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ‘ಎಂ- ಕ್ಯಾಪ್’ ಅನುಪಾತ ಅರ್ಥವಿಲ್ಲದ್ದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.