
ಪಿಟಿಐ
ಮುಂಬೈ: ಪ್ರಸಕ್ತ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಕರೂರ್ ವೈಶ್ಯ ಬ್ಯಾಂಕ್ನ ನಿವ್ವಳ ಲಾಭದಲ್ಲಿ ಶೇ 39ರಷ್ಟು ಹೆಚ್ಚಳವಾಗಿದೆ.
ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ಬ್ಯಾಂಕ್ ₹496 ಕೋಟಿ ಲಾಭ ಗಳಿಸಿತ್ತು. ಈ ಬಾರಿ ₹690 ಕೋಟಿಗೆ ಹೆಚ್ಚಳವಾಗಿದೆ ಎಂದು ಬ್ಯಾಂಕ್ ತಿಳಿಸಿದೆ.
ನಿವ್ವಳ ಬಡ್ಡಿ ವರಮಾನ ಶೇ 14ರಷ್ಟು ಹೆಚ್ಚಳವಾಗಿದ್ದು, ₹1,239 ಕೋಟಿಯಷ್ಟಾಗಿದೆ. ವಸೂಲಾಗದ ಸಾಲದ ಪ್ರಮಾಣ ಶೇ 0.71ರಿಂದ ಶೇ 0.12ಕ್ಕೆ ಇಳಿದಿದೆ. ಬ್ಯಾಂಕ್ನ ಬಂಡವಾಳ ಮೀಸಲು ಅನುಪಾತ (ಸಿಎಆರ್) ಶೇ 16.05ರಷ್ಟಾಗಿದೆ ಎಂದು ತಿಳಿಸಿದೆ.
ಬ್ಯಾಂಕ್ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಬಿ.ರಮೇಶ್ ಬಾಬು ಅವರ ಅಧಿಕಾರಾವಧಿ ಈ ವರ್ಷದ ಜುಲೈ 28ಕ್ಕೆ ಕೊನೆಯಾಗುತ್ತಿತ್ತು. ಬ್ಯಾಂಕ್ನ ಆಡಳಿತ ಮಂಡಳಿಯು ಇವರ ಅಧಿಕಾರಾವಧಿಯನ್ನು ಎರಡು ವರ್ಷ ವಿಸ್ತರಿಸಿದೆ.
Highlights - null
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.