ಚೆನ್ನೈ: ಪ್ರಸಕ್ತ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ಕರೂರು ವೈಶ್ಯ ಬ್ಯಾಂಕ್ ₹521 ಕೋಟಿ ನಿವ್ವಳ ಲಾಭ ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹458 ಕೋಟಿ ಲಾಭ ಗಳಿಸಿತ್ತು ಎಂದು ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ರಮೇಶ ಬಾಬು ತಿಳಿಸಿದ್ದಾರೆ.
ಬ್ಯಾಂಕ್ನ ಒಟ್ಟು ವರಮಾನ ₹3,015 ಕೋಟಿಯಷ್ಟಾಗಿದೆ. ಒಟ್ಟು ವ್ಯವಹಾರ ₹1,96,024 ಕೋಟಿಗೆ ಹೆಚ್ಚಳವಾಗಿದೆ. ಇದು 2024ರ ಜೂನ್ ತ್ರೈಮಾಸಿಕದಲ್ಲಿ ಇದು ₹1,70,059 ಕೋಟಿಯಷ್ಟಿತ್ತು.
ವಸೂಲಾಗದ ಸಾಲದ ಸರಾಸರಿ ಪ್ರಮಾಣ (ಜಿಎನ್ಪಿಎ) ಶೇ 1.32ರಿಂದ ಶೇ 0.66ಕ್ಕೆ ಇಳಿದಿದೆ. ನಿವ್ವಳ ಎನ್ಪಿಎ ಶೇ 1ಕ್ಕಿಂತ ಕಡಿಮೆ ಇದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.