ಬೆಂಗಳೂರು:ಕುದುರೆಮುಖ ಕಬ್ಬಿಣ ಅದಿರು ಕಂಪನಿಯು (ಕೆಐಒಸಿಎಲ್) ಪ್ರಸಕ್ತ ಹಣಕಾಸು ವರ್ಷದ ಮೊದಲ 6 ತಿಂಗಳಲ್ಲಿ ₹ 48.90 ಕೋಟಿಗಳಷ್ಟು ನಿವ್ವಳ ಲಾಭ ಗಳಿಸಿದೆ.
ಹಿಂದಿನ ವರ್ಷದ ಇದೇ ಅವಧಿಯಲ್ಲಿ ನಿವ್ವಳ ಲಾಭ ₹ 8.35 ಕೋಟಿ ಇತ್ತು.‘ಡಾಲರ್ ಮೌಲ್ಯ ಏರಿಕೆ, ದೇಶಿ ಮಾರುಕಟ್ಟೆಯಲ್ಲಿ ಉಕ್ಕು ಉತ್ಪಾದನೆ ಹೆಚ್ಚಳ ಮತ್ತು ರಫ್ತು ವಹಿವಾಟಿನ ಏರಿಕೆಯಿಂದ ಹಣಕಾಸು ಸಾಧನೆ ಸುಧಾರಿಸಿದೆ’ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ. ವಿ. ಸುಬ್ಬರಾವ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.