ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮವು ತನ್ನ ಹೊಸ ವಹಿವಾಟನ್ನು ಡಿಜಿಟಲೀಕರಣಗೊಳಿಸುವ ಭಾಗವಾಗಿ ಏಜೆಂಟ್ಗಳು ಮತ್ತು ಮಧ್ಯವರ್ತಿಗಳಿಗೆ ‘ಆತ್ಮನಿರ್ಭರ ಭಾರತ ನ್ಯೂ ಬಿಸಿನೆಸ್ ಡಿಜಿಟಲ್ ಅಪ್ಲಿಕೇಷನ್’ (ಆನಂದ ಆ್ಯಪ್) ಬಿಡುಗಡೆ ಮಾಡಿದೆ.
ಈ ಆ್ಯಪ್ಅನ್ನು ಏಜೆಂಟ್ಗಳು, ಮಧ್ಯವರ್ತಿಗಳು ಬಳಸುವುದು ಹೆಚ್ಚಲಿದೆ ಎಂಬ ನಿರೀಕ್ಷೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ವಿಡಿಯೊ ಕಾನ್ಫರೆನ್ಸ್ ಮೂಲಕ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಎಲ್ಐಸಿಯ ಅಧ್ಯಕ್ಷ ಎಂ.ಆರ್. ಕುಮಾರ್ ಅವರು ಆ್ಯಪ್ ಅನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಏಜೆಂಟ್ಗಳಿಗಾಗಿ ಇ-ತರಬೇತಿ ವೀಡಿಯೊ ಬಿಡುಗಡೆ ಮಾಡಲಾಯಿತು. ಮೊಬೈಲ್ ಆ್ಯಪ್ನ ಪ್ರಮುಖ ಲಕ್ಷಣಗಳನ್ನು ಮತ್ತು ಜೀವವಿಮಾ ಪಾಲಿಸಿಯನ್ನು ಪೂರ್ಣಗೊಳಿಸುವ ಪ್ರಕ್ರಿಯೆಯ ಮಾಹಿತಿಯು ಈ ವಿಡಿಯೊದಲ್ಲಿದೆ ಎಂದು ಕಂಪನಿಯು ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.