ಬೆಂಗಳೂರು: ಹಣಕಾಸು ಸೇವೆಗಳ ಇಲಾಖೆಯ ರಾಜ್ಯ ಸಚಿವ ಡಾ. ಭಾಗವತ್ ಕೃಷ್ಣರಾವ್ ಕರಾಡ್ ಅವರು ಮುಂಬೈನಲ್ಲಿ ಇರುವ ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ಕೇಂದ್ರ ಕಚೇರಿಗೆ ಸೋಮವಾರ ಭೇಟಿ ನೀಡಿ, ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.
ಜಾಗತಿಕ ಮಟ್ಟದಲ್ಲಿ ವಿಮಾ ಬ್ರ್ಯಾಂಡ್ಗಳ ನಡುವೆ ಎಲ್ಐಸಿಯು ಮೊದಲ ಸ್ಥಾನ ಪಡೆಯಬೇಕು ಎಂದು ಸಚಿವರು ಆಶಿಸಿದರು. ಎಲ್ಐಸಿ ಅಧ್ಯಕ್ಷ ಎಂ.ಆರ್. ಕುಮಾರ್ ಮತ್ತು ನಿಗಮದ ಹಿರಿಯ ಅಧಿಕಾರಿಗಳು ಸಚಿವರ ಭೇಟಿ ಸಂದರ್ಭದಲ್ಲಿ ಹಾಜರಿದ್ದರು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.