ನವದೆಹಲಿ: ಕೇಂದ್ರ ಸರ್ಕಾರವು ಶೀಘ್ರದಲ್ಲೇ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರದಲ್ಲಿ ಇಳಿಕೆ ಮಾಡುವ ಸಾಧ್ಯತೆ ಇದೆ.ಸಣ್ಣ ಉಳಿತಾಯದಿಂದ ಬರುವ ಬಡ್ಡಿ ದರವನ್ನೇ ನಂಬಿಕೊಂಡಿರುವ ಹಿರಿಯ ನಾಗರಿಕರು ಇದರಿಂದ ಹೆಚ್ಚು ಸಮಸ್ಯೆಗೆ ಒಳಗಾಗಲಿದ್ದಾರೆ.
ಬ್ಯಾಂಕ್ಗಳು ರೆಪೊ ದರ ಕಡಿತದ ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾಯಿಸಲು ಈ ಕ್ರಮ ಕೈಗೊಳ್ಳುವಂತೆ ಹಣಕಾಸು ಸಚಿವಾಲಯಕ್ಕೆಆರ್ಬಿಐ ಸಲಹೆ ನೀಡಿದೆ. ಇದನ್ನು ಸಚಿವಾಲಯ ಪರಿಗಣಿಸುವ ಸಾಧ್ಯತೆ ಇದೆ.
ಸಣ್ಣ ಉಳಿತಾಯ ಯೋಜನೆಗಳಿಗೆ ಗರಿಷ್ಠ ಬಡ್ಡಿದರ ಇದ್ದರೆ ಬ್ಯಾಂಕ್ಗಳಿಗೆ ಠೇವಣಿಗಳ ಮೇಲಿನ ಬಡ್ಡಿದರದಲ್ಲಿ ಕಡಿತ ಮಾಡಲು ಸಾಧ್ಯವಾಗುವುದಿಲ್ಲ. ಅದರಿಂದಾಗಿ ಸಾಲದ ಮೇಲಿನ ಬಡ್ಡಿದರದಲ್ಲಿಯೂ ಇಳಿಕೆ ಮಾಡಲು ಆಗುವುದಿಲ್ಲ.ಈ ಯೋಜನೆಗಳಿಂದ ಸರ್ಕಾರ ಹೆಚ್ಚಿನ ಬಂಡವಾಳವನ್ನು ಸಂಗ್ರಹಿಸುತ್ತಿದೆ. ಹೀಗಾಗಿ ಬಡ್ಡಿದರವನ್ನು ಗರಿಷ್ಠ ಮಟ್ಟದಲ್ಲಿಯೇ ಇಟ್ಟು ಇನ್ನೂ ಹೆಚ್ಚಿನ ಬಂಡವಾಳ ಆಕರ್ಷಿಸುವ ಯೋಜನೆ ಸರ್ಕಾರದ್ದು.ಹೀಗಾಗಿ ಜುಲೈ ನಂತರ ಬಡ್ಡಿದರಗಳಲ್ಲಿ ಪರಿಷ್ಕರಣೆ ಮಾಡಿಲ್ಲ.
ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಬಡ್ಡಿದರಗಳಲ್ಲಿ ಇಳಿಕೆ ಮಾಡಬೇಕು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಹಣಕಾಸು ನೀತಿ ಪರಾಮರ್ಶೆಯ ಸಂದರ್ಭದಲ್ಲಿ ಹೇಳಿದ್ದಾರೆ.
ಬ್ಯಾಂಕ್ ಠೇವಣಿಗಳ ಬಡ್ಡಿದರವುಸಣ್ಣ ಉಳಿತಾಯ ಯೋಜನೆಗಳಿಗಿಂತಲೂ ಕಡಿಮೆ ಇದೆ. ಉದಾಹರಣೆಗೆ2 ರಿಂದ 5 ವರ್ಷಗಳ ಅವಧಿ ಠೇವಣಿಗೆ ಎಸ್ಬಿಐ ಶೇ 6.25ರಷ್ಟು ಬಡ್ಡಿದರ ನೀಡುತ್ತಿದೆ. ಹೀಗಾಗಿಸಣ್ಣ ಉಳಿತಾಯಗಳಿಗೆ ಗರಿಷ್ಠ ಬಡ್ಡಿದರ ಇದ್ದರೆ ಬ್ಯಾಂಕ್ಗಳಿಗೆ ಠೇವಣಿ ಸಂಗ್ರಹ ಹೆಚ್ಚಿಸಲು ಕಷ್ಟವಾಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.