ಚೆನ್ನೈ : ಕರ್ನಾಟಕದಲ್ಲಿ ಜನಪ್ರಿಯವಾಗಿರುವ ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ‘ನಂದಿನಿ’ ಬ್ರ್ಯಾಂಡ್ನ ಹಾಲು ಮತ್ತು ಹಾಲಿನ ವೈವಿಧ್ಯಮಯ ಉತ್ಪನ್ನಗಳು ಈಗ ತಮಿಳುನಾಡು ಮಾರುಕಟ್ಟೆಗೆ ಲಗ್ಗೆ ಹಾಕಿವೆ.
ಸುಂದರಂ ಬಿಎನ್ಪಿ ಪರಿಬಾಸ್ ಹೋಂ ಫೈನಾನ್ಸ್ನ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ ಆಚಾರ್ಯ ಅವರು, ಇಲ್ಲಿ ನಡೆದ ಸಮಾರಂಭದಲ್ಲಿ ‘ನಂದಿನಿ’ ಬ್ರ್ಯಾಂಡ್ನ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡಿದರು. ಬೆಂಗಳೂರು ಸಹಕಾರಿ ಹಾಲು ಒಕ್ಕೂಟದ (ಬಮುಲ್) ಅಧ್ಯಕ್ಷ ಬಿ. ಜಿ. ಆಂಜನಪ್ಪ ಅವರು ಉಪಸ್ಥಿತರಿದ್ದರು.
ನಂದಿನಿ ಉತ್ಪನ್ನಗಳ ಪ್ಯಾಕಿಂಗ್ ಮತ್ತು ಮಾರಾಟ ಉದ್ದೇಶಕ್ಕೆ ‘ಬಮುಲ್’, ಆರ್ಕೆಆರ್ ಡೇರಿ ಸಂಸ್ಥೆ ಜತೆ ಒಪ್ಪಂದ ಮಾಡಿಕೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.