ಶಿವರಾಜ್ ಸಿಂಗ್ ಚೌಹಾಣ್ –ಪಿಟಿಐ ಚಿತ್ರ
ಚಂಡೀಗಢ: ದೇಶದಾದ್ಯಂತ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿ ಶೀಘ್ರವೇ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಈ ಸಮಿತಿ ಮೂಲಕ ನೈಸರ್ಗಿಕ ಕೃಷಿ ಅಳವಡಿಕೆಗೆ ಬಗ್ಗೆ ರೈತರಿಗೆ ಅರಿವು ಮೂಡಿಸಲಾಗುವುದು. ಜತೆಗೆ, ಅಗತ್ಯ ತರಬೇತಿ ಕೂಡ ನೀಡಲಾಗುವುದು ಎಂದು ತಿಳಿಸಿದ್ದಾರೆ.
ರೈತರು ಸರಿಯಾಗಿ ಈ ಕೃಷಿ ಪದ್ಧತಿ ಅನುಸರಿಸಿದರೆ ಅವರ ಆದಾಯವಷ್ಟೇ ಹೆಚ್ಚಳವಾಗುವುದಿಲ್ಲ. ಮಣ್ಣಿನ ಫಲವತ್ತತೆ ಕೂಡ ವೃದ್ಧಿಸಲಿದೆ. ದೇಶದ ನಾಗರಿಕರಿಗೆ ರಾಸಾಯನಿಕ ಮತ್ತು ಕೀಟನಾಶಕ ಮುಕ್ತ ತರಕಾರಿ, ಧಾನ್ಯ ಮತ್ತು ಹಣ್ಣುಗಳು ದೊರೆಯಲಿವೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.