ADVERTISEMENT

ನೈಸರ್ಗಿಕ ಕೃಷಿಗೆ ಉತ್ತೇಜನಕ್ಕೆ ಸಮಿತಿ ರಚನೆ: ಶಿವರಾಜ್‌ ಸಿಂಗ್‌ ಚೌಹಾಣ್‌

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2025, 13:18 IST
Last Updated 23 ಫೆಬ್ರುವರಿ 2025, 13:18 IST
<div class="paragraphs"><p>ಶಿವರಾಜ್‌ ಸಿಂಗ್‌ ಚೌಹಾಣ್‌ –ಪಿಟಿಐ ಚಿತ್ರ</p></div>

ಶಿವರಾಜ್‌ ಸಿಂಗ್‌ ಚೌಹಾಣ್‌ –ಪಿಟಿಐ ಚಿತ್ರ

   

ಚಂಡೀಗಢ: ದೇಶದಾದ್ಯಂತ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿ ಶೀಘ್ರವೇ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ತಿಳಿಸಿದ್ದಾರೆ.

ಈ ಸಮಿತಿ ಮೂಲಕ ನೈಸರ್ಗಿಕ ಕೃಷಿ ಅಳವಡಿಕೆಗೆ ಬಗ್ಗೆ ರೈತರಿಗೆ ಅರಿವು ಮೂಡಿಸಲಾಗುವುದು. ಜತೆಗೆ, ಅಗತ್ಯ ತರಬೇತಿ ಕೂಡ ನೀಡಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ರೈತರು ಸರಿಯಾಗಿ ಈ ಕೃಷಿ ಪದ್ಧತಿ ಅನುಸರಿಸಿದರೆ ಅವರ ಆದಾಯವಷ್ಟೇ ಹೆಚ್ಚಳವಾಗುವುದಿಲ್ಲ. ಮಣ್ಣಿನ ಫಲವತ್ತತೆ ಕೂಡ ವೃದ್ಧಿಸಲಿದೆ. ದೇಶದ ನಾಗರಿಕರಿಗೆ ರಾಸಾಯನಿಕ ಮತ್ತು ಕೀಟನಾಶಕ ಮುಕ್ತ ತರಕಾರಿ, ಧಾನ್ಯ ಮತ್ತು ಹಣ್ಣುಗಳು ದೊರೆಯಲಿವೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.