ಬೆಂಗಳೂರು: ‘ಎನ್ಎಂಡಿಸಿ ಲಿಮಿಟೆಡ್ನ ದೋಣಿಮಲೆ ಕಾಂಪ್ಲೆಕ್ಸ್ನಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಕೆಲವು ಕಿಡಿಗೇಡಿಗಳು ಹಣಕ್ಕೆ ಬೇಡಿಕೆ ಇರಿಸುತ್ತಿರುವುದು ಗಮನಕ್ಕೆ ಬಂದಿದೆ’ ಎಂದು ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್ಎಂಡಿಸಿ ಹೇಳಿದೆ.
ಕಂಪನಿಯು ಇಂತಹ ವ್ಯಕ್ತಿಗಳ ಮೂಲಕ ಉದ್ಯೋಗ ನೀಡುವುದಿಲ್ಲ. ಕಂಪನಿಯಲ್ಲಿ ನೇಮಕ ಪ್ರಕ್ರಿಯೆಯು ಪಾರದರ್ಶಕವಾಗಿ, ವಿವಿಧ ಪರೀಕ್ಷೆಗಳ ಮೂಲಕ ನಡೆಯುತ್ತದೆ. ಫೆಬ್ರುವರಿ 3ರ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಗೆ ಹಾಜರಾಗಿದ್ದವರು ಇಂತಹ ವ್ಯಕ್ತಿಗಳ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.