ನವದೆಹಲಿ: ಕೊರೊನಾ ಕಾರಣ ಲಾಕ್ ಡೌನ್ ನಿಂದಾಗಿ ಮುಚ್ಚಲ್ಪಟ್ಟಿದ್ದ ಸ್ಯಾಮ್ಸಂಗ್ ಮೊಬೈಲ್ ತಯಾರಿಕಾ ಘಟಕ ಶುಕ್ರವಾರದಿಂದ ಪುನರಾರಂಭವಾಗಿದೆ.
ದೆಹಲಿ ಸರ್ಕಾರ ಕಾರ್ಖಾನೆಗಳನ್ನು ತೆರೆಯಲು ಅವಕಾಶ ನೀಡಿದ ಕಾರಣ ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಿಸಿದ್ದರಿಂದ ಸ್ಯಾಮ್ಸಂಗ್ ಘಟಕವನ್ನು ಸ್ಥಗಿತಗೊಳಿಸಲಾಗಿತ್ತು.
ಸರ್ಕಾರವು ಆದಷ್ಟು ಕಾರ್ಮಿಕರ ಸಂಖ್ಯೆಯನ್ನು ಕಡಿಮೆ ಮಾಡಿ ಕೆಲಸ ಮಾಡಲು ಅವಕಾಶ ನೀಡಿದೆ. ಈ ಕಾರಣದಿಂದಾಗಿ ಶುಕ್ರವಾರ 3 ಸಾವಿರ ಕಾರ್ಮಿಕರನ್ನು ಶುಕ್ರವಾರ ಬೆಳಿಗ್ಗೆಪ್ರತ್ಯೇಕ ಬಸ್ಗಳಲ್ಲಿ ಘಟಕಕ್ಕೆ ಕರೆತರಲಾಯಿತು.
ನೊಯ್ಡಾದಲ್ಲಿರುವ ಘಟಕದಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎನ್ನಲಾಗಿದೆ. ಅಂತರ ಕಾಯ್ದುಕೊಳ್ಳುವಿಕೆ, ಸ್ಯಾನಿಟೈಸರ್ ಬಳಸುವುದೂ ಸೇರಿದಂತೆ ಸೋಂಕು ಹರಡದಂತೆಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಜಾರಿಗೆ ತಂದಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸ್ಥಳೀಯ ಆಡಳಿತ ಮೊಬೈಲ್ ಸಂಸ್ಥೆಗೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.