ಹುಬ್ಬಳ್ಳಿ: ಈರುಳ್ಳಿಗೆ ಸರ್ಕಾರ ಘೋಷಿಸಿರುವ ಪ್ರತಿ ಕ್ವಿಂಟಲ್ಗೆ ₹ 200 ಪ್ರೋತ್ಸಾಹ ಧನ ಪಡೆಯಲು, ರೈತರ ಹೆಸರು ನೋಂದಾಯಿಸುವ ಅವಧಿ ವಿಸ್ತರಿಸಲಾಗಿದೆ.
ಸೋಮವಾರ ಇಲ್ಲಿನ ಎಪಿಎಂಸಿಗೆ ಭೇಟಿ ನೀಡಿ ಈರುಳ್ಳಿ ಬೆಳೆಗಾರರ ಸಮಸ್ಯೆ ಆಲಿಸಿದ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ‘ಹೆಸರು ನೋಂದಾಯಿಸಲು ಸೋಮವಾರ ಕೊನೆಯ ದಿನವಾಗಿತ್ತು. ರೈತರು ಮನವಿ ಮಾಡಿರುವುದರಿಂದ ಇನ್ನೂ 15 ದಿನ ಅವಧಿ ವಿಸ್ತರಿಸಲಾಗಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.