ನವದೆಹಲಿ: ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ಗಳ ಜೋಡಣೆ ಗಡುವನ್ನು ಕೇಂದ್ರ ಸರ್ಕಾರ ಮೂರು ತಿಂಗಳು ವಿಸ್ತರಿಸಿದ್ದು, ಸೆಪ್ಟೆಂಬರ್ 30ರ ವರೆಗೆ ಕಾಲಾವಕಾಶ ನೀಡಿದೆ. ಜೊತೆಗೆ ಉದ್ಯೋಗಿಗಳು ಟಿಡಿಎಸ್ ಸಲ್ಲಿಸಲು ಕೊನೆಯ ದಿನಾಂಕವನ್ನು ಜುಲೈ 15ರಿಂದ ಜುಲೈ 31ಕ್ಕೆ ಮುಂದೂಡಿದೆ.
ತೆರಿಗೆ ವ್ಯಾಜ್ಯಗಳ ಇತ್ಯರ್ಥಕ್ಕೆ ರೂಪಿಸಲಾಗಿರುವ ವಿವಾದ್ ಸೆ ವಿಶ್ವಾಸ್ ಯೋಜನೆಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ. ತೆರಿಗೆ ಪಾವತಿದಾರರು ಅಕ್ಟೋಬರ್ 31ರವರೆಗೆ ಹೆಚ್ಚುವರಿ ಬಡ್ಡಿ ಸಹಿತವಾಗಿ ಪಾವತಿ ಮಾಡಲು ಅವಕಾಶ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.