ADVERTISEMENT

ಕರ್ಣಾಟಕ ಬ್ಯಾಂಕ್‌ ಅಧ್ಯಕ್ಷರಾಗಿ ಪ್ರದೀಪ್ ಕುಮಾರ ಪಂಜ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2021, 19:31 IST
Last Updated 15 ಅಕ್ಟೋಬರ್ 2021, 19:31 IST
ಪ್ರದೀಪ್‌ಕುಮಾರ್ ಪಂಜ
ಪ್ರದೀಪ್‌ಕುಮಾರ್ ಪಂಜ   

ಮಂಗಳೂರು: ಕರ್ಣಾಟಕ ಬ್ಯಾಂಕಿನ ಸ್ವತಂತ್ರ ನಿರ್ದೇಶಕ ಪ್ರದೀಪ್ ಕುಮಾರ್ ಪಂಜ ಅವರನ್ನು ಬ್ಯಾಂಕಿನ ಅರೆಕಾಲಿಕ ಅಧ್ಯಕ್ಷರನ್ನಾಗಿ ನವೆಂಬರ್ 14ರಿಂದ ಅನ್ವಯವಾಗುವಂತೆ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದ್ದು, ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ ಅನುಮೋದಿಸಿದೆ.

ಬ್ಯಾಂಕಿನ ಈಗಿನ ಅಧ್ಯಕ್ಷ ಪಿ. ಜಯರಾಮ ಭಟ್ ಅವರ ಅಧಿಕಾರ ಅವಧಿ ನವೆಂಬರ್ 13ಕ್ಕೆ ಮುಗಿಯಲಿದೆ. ಪ್ರದೀಪ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಪಂಜದವರಾಗಿದ್ದು, 2020ರ ಆಗಸ್ಟ್‌ 19ರಿಂದ ಕರ್ಣಾಟಕ ಬ್ಯಾಂಕ್‌ ನಿರ್ದೇಶಕರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT