ADVERTISEMENT

ವಿಮಾನ ನಿಲ್ದಾಣಗಳ ಖಾಸಗೀಕರಣ: ಸಚಿವ ಹರದೀಪ್ ಸಿಂಗ್ ಪುರಿ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2020, 16:18 IST
Last Updated 18 ಆಗಸ್ಟ್ 2020, 16:18 IST

ನವದೆಹಲಿ: ವಿಮಾನ ನಿಲ್ದಾಣಗಳನ್ನು ಇನ್ನಷ್ಟು ಖಾಸಗೀಕರಣಗೊಳಿಸುವ ಪ್ರಸ್ತಾವನೆಯೊಂದನ್ನು ನಾಗರಿಕ ವಿಮಾನಯಾನ ಸಚಿವಾಲಯವು ಕೇಂದ್ರ ಸಚಿವ ಸಂಪುಟದ ಮುಂದೆ ಬುಧವಾರ ಇರಿಸಲಿದೆ ಎಂದು ಸಚಿವ ಹರದೀಪ್ ಸಿಂಗ್ ಪುರಿ ತಿಳಿಸಿದರು.

ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮೊದಲ ಸುತ್ತಿನ ಖಾಸಗೀಕರಣ ಪ್ರಕ್ರಿಯೆಯ ಅಡಿಯಲ್ಲಿ ಲಖನೌ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳ ಕಾರ್ಯಾಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿಯನ್ನು ಪಿಪಿಪಿ (ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವ) ಮಾದರಿಯಲ್ಲಿ ನಿಭಾಯಿಸಲು ಅನುಮತಿ ನೀಡಿತ್ತು.

ಇದೇ ರೀತಿ, ಅಮೃತಸರ, ವಾರಾಣಸಿ, ಭುವನೇಶ್ವರ, ಇಂದೋರ್, ರಾಯಪುರ ಮತ್ತು ತಿರುಚಿ ವಿಮಾನ ನಿಲ್ದಾಣಗಳನ್ನು ಖಾಸಗೀಕರಣ ಮಾಡಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು (ಎಎಐ) ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ 2019ರ ಸೆಪ್ಟೆಂಬರ್‌ನಲ್ಲಿ ಶಿಫಾರಸು ಮಾಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.